ನವದೆಹಲಿ: ಇಂದು ದೇಶವು 24 ನೇ ವರ್ಷದ ಕಾರ್ಗಿಲ್ ದಿವಸ್ ಅನ್ನು ಆಚರಿಸುತ್ತಿದೆ. 24 ವರ್ಷಗಳ ಹಿಂದೆ ಇದೇ ದಿನ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ವೀರ ಭಾರತೀಯ ಸೈನಿಕರು ತಮ್ಮ ನಿಯಂತ್ರಣದಲ್ಲಿರುವ ಪೋಸ್ಟ್ಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು.
ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಕಾರ್ಗಿಲ್ ವಿಜಯ್ ದಿವಸ್ ಭಾರತದ ಧೈರ್ಯಶಾಲಿಗಳ ವೀರಗಾಥೆ ಸ್ಮರಿಸುತ್ತದೆ. ಕಾರ್ಗಿಲ್ ವೀರ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ವೀರಯೋಧರಿಗೆ ನಮನಗಳು, ಜೈ ಹಿಂದ್” ಎಂದು ಬರೆದಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ಕಾರ್ಗಿಲ್ ವಿಜಯ್ ದಿವಸ್ ಕೋಟ್ಯಂತರ ದೇಶವಾಸಿಗಳ ವಿಜಯದ ದಿನ. ಮಾತೃಭೂಮಿಯನ್ನು ರಕ್ಷಿಸಿದ ಸಮಸ್ತ ವೀರ ಯೋಧರಿಗೆ ನಮನ ಸಲ್ಲಿಸುವ ದಿನ. ಭಾರತ ಮಾತೆಯ ವೀರ ಸೈನಿಕರು ಕಾರ್ಗಿಲ್ನ ದುರ್ಗಮ ಬೆಟ್ಟಗಳ ಮೇಲೆ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸಮಗ್ರತೆಯನ್ನು ಎತ್ತಿ ಹಿಡಿದ ನಿಮ್ಮ ತ್ಯಾಗಕ್ಕೆ ವಂದಿಸುತ್ತೇನೆ” ಎಂದು ಸ್ಮರಿಸಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್ನ ದ್ರಾಸ್ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿ, “ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರಪುತ್ರರಿಗೆ ನನ್ನ ವಂದನೆಗಳು. ದೇಶವನ್ನು ಮೊದಲ ಸ್ಥಾನದಲ್ಲಿಟ್ಟು ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಹಿಂಜರಿಯದ ವೀರರಿಗೆ ವಂದಿಸುತ್ತೇನೆ” ಎಂದು ತಿಳಿಸಿದ್ದಾರೆ.ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಸೇನೆಯ ಹೆಲಿಕಾಪ್ಟರ್ಗಳು ಸ್ಮಾರಕಗಳಿಗೆ ಆಕಾಶದಿಂದ ಹೂಮಳೆಗೈದವು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ನಮ್ಮ ದೇಶದ ಕೀರ್ತಿಯನ್ನು ಎಲ್ಲೆಡೆ ಪಸರಿಸಿ, ನಮ್ಮ ರಾಷ್ಟ್ರಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರತಿಯೊಬ್ಬ ಸೈನಿಕನಿಗೆ ನಮ್ಮ ಕೋಟಿ ನಮನಗಳು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…