ನವದೆಹಲಿ: ಇಂದು ದೇಶವು 24 ನೇ ವರ್ಷದ ಕಾರ್ಗಿಲ್ ದಿವಸ್ ಅನ್ನು ಆಚರಿಸುತ್ತಿದೆ. 24 ವರ್ಷಗಳ ಹಿಂದೆ ಇದೇ ದಿನ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ವೀರ ಭಾರತೀಯ ಸೈನಿಕರು ತಮ್ಮ ನಿಯಂತ್ರಣದಲ್ಲಿರುವ ಪೋಸ್ಟ್ಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು.
ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಕಾರ್ಗಿಲ್ ವಿಜಯ್ ದಿವಸ್ ಭಾರತದ ಧೈರ್ಯಶಾಲಿಗಳ ವೀರಗಾಥೆ ಸ್ಮರಿಸುತ್ತದೆ. ಕಾರ್ಗಿಲ್ ವೀರ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ವೀರಯೋಧರಿಗೆ ನಮನಗಳು, ಜೈ ಹಿಂದ್” ಎಂದು ಬರೆದಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ಕಾರ್ಗಿಲ್ ವಿಜಯ್ ದಿವಸ್ ಕೋಟ್ಯಂತರ ದೇಶವಾಸಿಗಳ ವಿಜಯದ ದಿನ. ಮಾತೃಭೂಮಿಯನ್ನು ರಕ್ಷಿಸಿದ ಸಮಸ್ತ ವೀರ ಯೋಧರಿಗೆ ನಮನ ಸಲ್ಲಿಸುವ ದಿನ. ಭಾರತ ಮಾತೆಯ ವೀರ ಸೈನಿಕರು ಕಾರ್ಗಿಲ್ನ ದುರ್ಗಮ ಬೆಟ್ಟಗಳ ಮೇಲೆ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸಮಗ್ರತೆಯನ್ನು ಎತ್ತಿ ಹಿಡಿದ ನಿಮ್ಮ ತ್ಯಾಗಕ್ಕೆ ವಂದಿಸುತ್ತೇನೆ” ಎಂದು ಸ್ಮರಿಸಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್ನ ದ್ರಾಸ್ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿ, “ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರಪುತ್ರರಿಗೆ ನನ್ನ ವಂದನೆಗಳು. ದೇಶವನ್ನು ಮೊದಲ ಸ್ಥಾನದಲ್ಲಿಟ್ಟು ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಹಿಂಜರಿಯದ ವೀರರಿಗೆ ವಂದಿಸುತ್ತೇನೆ” ಎಂದು ತಿಳಿಸಿದ್ದಾರೆ.ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಸೇನೆಯ ಹೆಲಿಕಾಪ್ಟರ್ಗಳು ಸ್ಮಾರಕಗಳಿಗೆ ಆಕಾಶದಿಂದ ಹೂಮಳೆಗೈದವು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ನಮ್ಮ ದೇಶದ ಕೀರ್ತಿಯನ್ನು ಎಲ್ಲೆಡೆ ಪಸರಿಸಿ, ನಮ್ಮ ರಾಷ್ಟ್ರಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರತಿಯೊಬ್ಬ ಸೈನಿಕನಿಗೆ ನಮ್ಮ ಕೋಟಿ ನಮನಗಳು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…