ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಂಚಿನಡ್ಕಪದವುನಲ್ಲಿ 5 ತಿಂಗಳ ಹಿಂದೆ ಮೇಯಲು ಬಿಟ್ಟ ದನವೊಂದನ್ನು ಕಳವು ಮಾಡಿದ ಆರೋಪಿಯ ಬ*ಧನ

ಇರಾ ಗ್ರಾಮದ ಕಂಚಿನಡ್ಕಪದವುನಲ್ಲಿ ಸುಮಾರು 5 ತಿಂಗಳ ಹಿಂದೆ ಮೇಯಲು ಬಿಟ್ಟ ದನವೊಂದನ್ನು ಕಳವು ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಬಂಧಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೂಡುಪೆರಾರ ಗ್ರಾಮದ ಗಂಜಿಮಠ ಮುಂಡೇವು ಮನೆ ನಿವಾಸಿ ಇರ್ಷಾದ್(35) ಬಂಧಿತ ಆರೋಪಿ. ಆತ ಕಳೆದ ಮಾರ್ಚ್ 23ರಂದು ಕಂಚಿನಡ್ಕಪದವುನಲ್ಲಿ ಮೇಯಲು ಬಿಟ್ಟ ದನವನ್ನು ಕಳವು ಮಾಡಿದ್ದು, ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಹಲವು ಜಿಲ್ಲೆಗಳಲ್ಲಿ ನಡೆದ 15ಕ್ಕೂ ಅಧಿಕ ದನ ಸಾಗಾಟ, ಕಳವು ಪ್ರಕರಣದ ಆರೋಪಿಯಾಗಿದ್ದಾನೆ. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ., ಅಡಿಶನಲ್ ಎಸ್‌ಪಿ ಅನಿಲ್‌ಕುಮಾರ್ ಭೂಮರೆಡ್ಡಿ ಹಾಗೂ ಬಂಟ್ವಾಳ ಡಿವೈಎಸ್‌ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಇನ್ಸ್ಪೆಕ್ಟರ್ ಶಿವಕುಮಾರ್ ಬಿ. ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಮಂಜುನಾಥ್ ಟಿ, ಕೃಷ್ಣಕಾಂತ್ ಪಾಟೀಲ್ ಕೆ. ಹಾಗೂ ಸಿಬಂದಿ ಪ್ರಶಾಂತ್, ಲೋಕೇಶ್, ಕೃಷ್ಣ ನಾಯ್ಕ್, ಮಾರುತಿ ಹಾಗೂ ಹಾಲೇಶಪ್ಪ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!