ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ ಬಂಟ ಸಮಾಜ ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸುತ್ತಿರುವ ಗಣೇಶೋತ್ಸವದಿಂದ ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದ್ರು.
ಉದ್ಯಮಿ ಅರುಣೋದಯ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಸಾಧಕರಾದ ಬಂಟರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಮಾಜಿ ಸಂಚಾಲಕ ಜಯರಾಮ ಸಾಂತ, ಸುಶಾಂತ್ ಶೆಟ್ಟಿ, ಆತ್ಮೀ ಅಡಪ್ಪ ಹಾಗೂ ಸುರಾಗ್ ರೈ ಅವರನ್ನು ಸನ್ಮಾನಿಸಿದ್ದಾರೆ. ಇನ್ನು ಈ ಸಂದರ್ಭ ವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳಾದ ಅಶೋಕ್ ಶೆಟ್ಟಿ, ರತ್ನಾಕರಶೆಟ್ಟಿ ಎಕ್ಕಾರ್, ಮಹಾಬಲಚೌಟ, ಸತೀಶ್ ಶೆಟ್ಟಿ, ವಿಜಯ ಶೆಟ್ಟಿ, ಜಯರಾಮ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…