ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಆತನನ್ನು ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಲಾಗಿದೆ.
ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ. ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾಮ ಪಂಚಾಯತಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…