ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನಡೆದಾಡಲು ಅಸಾಧ್ಯವಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.
ಜನರು ಓಡಾಡುವ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಟಳ ತಾಳಲಾರದೆ ಜನ ರೋಸಿಹೋಗಿದ್ದಾರೆ. ಕೈಕುಂಜೆ ರಸ್ತೆಯಲ್ಲಿ ಸಂಜೆ ವೇಳೆ ಶಾಲೆಯಿಂದ ನಡೆದುಕೊಂಡು ಬರುವ ವಿದ್ಯಾರ್ಥಿಗಳಿಗೆ ನಾಯಿಗಳು ಕಾಟ ನೀಡುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ಇದರ ಜೊತೆಗೆ ಕೆ.ಎಸ್.ಆರ್.ಟಿ.ಬಸ್ ನಿಲ್ದಾಣ ಒಳಗೆ ನಾಯಿಗಳ ದಂಡು ಮಲಗಿರುವುದಲ್ಲದೆ, ಇಲ್ಲಿ ಬಸ್ ಕಾಯಲು ಬರುವವರಿಗೆ ಹೆದರಿಕೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ರಸ್ತೆಯ ಬದಿಯಲ್ಲಿ ಬಿಸಾಡುವ ತ್ಯಾಜ್ಯದ ರಾಶಿಗಳನ್ನು ನಡುರಸ್ತೆಗೆ ಎಳೆದು ತಂದು ರಸ್ತೆತುಂಬಾ ಗಲೀಜು ಮಾಡುವ ದೃಶ್ಯಗಳು ಕೂಡ ಬಂಟ್ವಾಳದ ಕೆಲವು ಕಡೆಗಳಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಬೀದಿ ನಾಯಿಗಳ ತೊಂದರೆಯಿಂದ ರೇಬಿಸ್ ರೋಗದ ಭಯ ಕೂಡ ಅವರಿಸಿದ್ದು, ಪುರಸಭೆ ಇದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಇಲ್ಲಿನ ಪುರಸಭಾ ನಿವಾಸಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಕಳೆದ ಪುರಸಭಾ ಮೀಟಿಂಗ್ ನಲ್ಲಿ ದೊಡ್ಡದಾದ ಚರ್ಚೆ ನಡೆದಿದ್ದು, ಸಂತಾನಹರಣ ಚಿಕಿತ್ಸೆ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಅದರ ಜೊತೆ ಇತ್ತೀಚಿಗೆ ನಡೆದ ಕೆ.ಡಿ.ಪಿ.ಸಭೆಯಲ್ಲಿ ಕೂಡ ಬೀದಿನಾಯಿಗಳ ಕಡಿವಾಣದ ಕ್ರಮದ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರೂ ಸ್ಥಳೀಯ ಆಡಳಿತದಿಂದ ಹಾಗೂ ತಾಲೂಕು ಪಂಚಾಯತ್ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂಬ ಆರೋಪಗಳು ಇದೀಗ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚಿತ ವಿಷಯವಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…