ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನಡೆದಾಡಲು ಅಸಾಧ್ಯವಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.
ಜನರು ಓಡಾಡುವ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಟಳ ತಾಳಲಾರದೆ ಜನ ರೋಸಿಹೋಗಿದ್ದಾರೆ. ಕೈಕುಂಜೆ ರಸ್ತೆಯಲ್ಲಿ ಸಂಜೆ ವೇಳೆ ಶಾಲೆಯಿಂದ ನಡೆದುಕೊಂಡು ಬರುವ ವಿದ್ಯಾರ್ಥಿಗಳಿಗೆ ನಾಯಿಗಳು ಕಾಟ ನೀಡುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ಇದರ ಜೊತೆಗೆ ಕೆ.ಎಸ್.ಆರ್.ಟಿ.ಬಸ್ ನಿಲ್ದಾಣ ಒಳಗೆ ನಾಯಿಗಳ ದಂಡು ಮಲಗಿರುವುದಲ್ಲದೆ, ಇಲ್ಲಿ ಬಸ್ ಕಾಯಲು ಬರುವವರಿಗೆ ಹೆದರಿಕೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ರಸ್ತೆಯ ಬದಿಯಲ್ಲಿ ಬಿಸಾಡುವ ತ್ಯಾಜ್ಯದ ರಾಶಿಗಳನ್ನು ನಡುರಸ್ತೆಗೆ ಎಳೆದು ತಂದು ರಸ್ತೆತುಂಬಾ ಗಲೀಜು ಮಾಡುವ ದೃಶ್ಯಗಳು ಕೂಡ ಬಂಟ್ವಾಳದ ಕೆಲವು ಕಡೆಗಳಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಬೀದಿ ನಾಯಿಗಳ ತೊಂದರೆಯಿಂದ ರೇಬಿಸ್ ರೋಗದ ಭಯ ಕೂಡ ಅವರಿಸಿದ್ದು, ಪುರಸಭೆ ಇದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಇಲ್ಲಿನ ಪುರಸಭಾ ನಿವಾಸಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಕಳೆದ ಪುರಸಭಾ ಮೀಟಿಂಗ್ ನಲ್ಲಿ ದೊಡ್ಡದಾದ ಚರ್ಚೆ ನಡೆದಿದ್ದು, ಸಂತಾನಹರಣ ಚಿಕಿತ್ಸೆ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಅದರ ಜೊತೆ ಇತ್ತೀಚಿಗೆ ನಡೆದ ಕೆ.ಡಿ.ಪಿ.ಸಭೆಯಲ್ಲಿ ಕೂಡ ಬೀದಿನಾಯಿಗಳ ಕಡಿವಾಣದ ಕ್ರಮದ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರೂ ಸ್ಥಳೀಯ ಆಡಳಿತದಿಂದ ಹಾಗೂ ತಾಲೂಕು ಪಂಚಾಯತ್ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂಬ ಆರೋಪಗಳು ಇದೀಗ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚಿತ ವಿಷಯವಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…