ಹೃದಯ ಮತ್ತು ನರನಾಳಗಳ ಆರೈಕೆಗಾಗಿ ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಯಾಥ್ಲ್ಯಾಬ್ ಕಾರ್ಯಾರಂಭ ಮಾಡಿದೆ.
ಹೈಲ್ಯಾಂಡ್ನ ಫಳ್ನೀರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆಯು, ಹೃದಯ, ನರ ಮತ್ತು ವಿಕಿರಣಶಾಸ್ತ್ರ ಕಾರ್ಯವಿಧಾನಗಳಿಗೆ ಉನ್ನತ ಗುಣಮಟ್ಟವನ್ನು ಹೊಂದಿರುವ ಅತ್ಯಂತ ಸುಧಾರಿತ ಇಂಟರ್ವೆನ್ಷನಲ್ ಸೂಟ್ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0 ಸೌಲಭ್ಯವನ್ನು ಅಳವಡಿಸಿಕೊಂಡಿದೆ. ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಳವಡಿಕೆಯಾಗಿರುವ ಈ ಅತ್ಯಾಧುನಿಕ, ಸೀಲಿಂಗ್-ಮೌಂಟೆಡ್ ಕ್ಯಾಥ್ಲ್ಯಾಬ್ ಹೃದಯ, ನರನಾಳ ಮತ್ತು ಇಂಟರ್ವೆನ್ಷನಲ್ ರೇಡಿಯಾಲಜಿ ಕಾರ್ಯವಿಧಾನಗಳಿಗೆ ವಿಶ್ವ ದರ್ಜೆಯ ನಿಖರತೆಯನ್ನು ಹೊಂದಿದೆ.
ಕಡಿಮೆ ಅವಧಿ ಮತ್ತು ಸುಧಾರಿತ ಸುರಕ್ಷತೆಯೊಂದಿಗೆ ಉತ್ತಮ ಫಲಿತಾಂಶಗಳನ್ನು ನೀಡಲು ವಿನ್ಯಾಸಗೊಳಿಸಲಾದ ಫಿಲಿಪ್ಸ್ ಅಜುರಿಯನ್ ವ್ಯವಸ್ಥೆಯಲ್ಲಿ ಗಾಯದ ಪ್ರಮಾಣ ಅತ್ಯಂತ ಕನಿಷ್ಠವಾಗಿರುತ್ತದೆ. ಸಂಕೀರ್ಣ ಹೃದಯ ಮತ್ತು ನರನಾಳ ಚಿಕಿತ್ಸೆಯ ಸಂದರ್ಭದಲ್ಲಿ ನಿಖರತೆಯನ್ನು ಹೆಚ್ಚಿಸುತ್ತದೆ. ಸಾಂಪ್ರದಾಯಿಕ ಕ್ಯಾತ್ ಲ್ಯಾಬ್ಗಳಿಗೆ ಹೋಲಿಸಿದರೆ ಈ ವಿಧಾನದಲ್ಲಿ ವಿಕಿರಣಕ್ಕೆ ಒಡ್ಡಿಕೊಳ್ಳುವಿಕೆ 30% ವರೆಗೆ ಕಡಿಮೆ. ಇದು ರೋಗಿ ಮತ್ತು ವೈದ್ಯರ ಸುರಕ್ಷತೆಯನ್ನು ಸುಧಾರಿಸುತ್ತದೆ. ನೈಜ-ಸಮಯದ, ನಿಖರವಾದ ದೃಶ್ಯಗಳ ಮೂಲಕ ಮಾರ್ಗದರ್ಶನವನ್ನು ಒದಗಿಸುತ್ತದೆ, ವೇಗವಾಗಿ ಮತ್ತು ಹೆಚ್ಚು ನಿಖರವಾದ ಸ್ಟೆಂಟ್ ನಿಯೋಜನೆಗೆ ಇದು ಅನುವು ಮಾಡಿಕೊಡುತ್ತದೆ, ಒಟ್ಟಾರೆ ಚಿಕಿತ್ಸಾ ಸಮಯವನ್ನು ಕಡಿಮೆ ಮಾಡುತ್ತದೆ ಎಂದು ಯೂನಿಟಿ ಆಸ್ಪತ್ರೆಯ ಪತ್ರಿಕಾ ಹೇಳಿಕೆ ತಿಳಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…