ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.

ಅವರು ಬಿಸಿರೋಡಿನಲ್ಲಿ ತಾಲೂಕು ಕೃಷಿಕ ಸಮಾಜ ಬಂಟ್ವಾಳ ಇದರ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದಾರೆ. ಕೃಷಿಕರ ಕೊಂಡಿಯಾಗಿದ್ದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವ ಕಾರ್ಯ ಕೃಷಿ ಸಮಾಜದಿಂದ ಆಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದು, ಕೃಷಿಕ ಸಮಾಜ ಭವನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ದ.ಕ.ಜಿಲ್ಲೆಯ ಕೃಷಿಕರು ಬುಧ್ಧಿವಂತರಿದ್ದು, ಭತ್ತದ ಕೃಷಿಯ ಜೊತೆ ಲಾಭದಾಯಕ ತೋಟಗಾರಿಕೆಯೆ ಬೆಲೆಗಳಿಗೆ ಅವಲಂಭಿತರಾಗಿದ್ದಾರೆ ಎಂದು ಅವರು ಹೇಳಿದ್ಧಾರೆ. ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



