ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.
ಅವರು ಬಿಸಿರೋಡಿನಲ್ಲಿ ತಾಲೂಕು ಕೃಷಿಕ ಸಮಾಜ ಬಂಟ್ವಾಳ ಇದರ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದಾರೆ. ಕೃಷಿಕರ ಕೊಂಡಿಯಾಗಿದ್ದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವ ಕಾರ್ಯ ಕೃಷಿ ಸಮಾಜದಿಂದ ಆಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದು, ಕೃಷಿಕ ಸಮಾಜ ಭವನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ದ.ಕ.ಜಿಲ್ಲೆಯ ಕೃಷಿಕರು ಬುಧ್ಧಿವಂತರಿದ್ದು, ಭತ್ತದ ಕೃಷಿಯ ಜೊತೆ ಲಾಭದಾಯಕ ತೋಟಗಾರಿಕೆಯೆ ಬೆಲೆಗಳಿಗೆ ಅವಲಂಭಿತರಾಗಿದ್ದಾರೆ ಎಂದು ಅವರು ಹೇಳಿದ್ಧಾರೆ. ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…