ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಆಫರ್ ನೀಡಿದೆ. ಜನರ ಜೇಬಿಗೆ ಜಿಎಸ್ಟಿ ದರ ಹಾಕುತ್ತಿರೋ ಬರೆಯನ್ನು ಕೊಂಚ ಕಡಿಮೆ ಮಾಡಿದೆ.
ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ದೇಶದಲ್ಲಿ ಎಲ್ಲ ಫುಡ್, ಟೆಕ್ಸ್ ಟೈಲ್ ಉತ್ಪನ್ನಗಳ ಮೇಲಿನ ಜಿಎಸ್ಟಿ ದರ ಇಳಿಕೆಯಾಗಿದೆ. ದಸರಾ, ದೀಪಾವಳಿಗೆ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ. ಬಡ-ಮಧ್ಯಮ ವರ್ಗಕ್ಕೆ ದಸರಾಗೂ ಮೊದಲೇ ದೀಪಾವಳಿ ಸಂಭ್ರಮಿಸುವ ಸಮಯ ಬಂದಿದೆ. ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಟ್ಯಾಕ್ಸ್ ಕ್ರಾಂತಿ ಮೊಳಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಎಸ್ಟಿ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 4 ಸ್ಲ್ಯಾಬ್ಗಳ ಬದಲು 2 ಸ್ಲ್ಯಾಬ್ಗಳಲ್ಲಿ ಜಿಎಸ್ಟಿ ಜಾರಿಗೆ ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಶೇ.5 ಮತ್ತು ಶೇ. 18ರ ಸ್ಲ್ಯಾಬ್ಗಳನ್ನ ಮಾತ್ರ ಉಳಿಸಿಕೊಳ್ಳಲು ಒಪ್ಪಿಗೆ ನೀಡಿದೆ.
ಇದ್ರಿಂದ ದೇಶದ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಚಾಕೋಲೆಟ್, ಕಾಫಿ, ಇನ್ಸ್ಟಾಂಟ್ ನೂಡಲ್ಸ್, ಪಾಸ್ತಾ, ಬೆಣ್ಣೆ, ತುಪ್ಪ, ಸಾಸ್, ನಮ್ಕೀನ್, ಸಂರಕ್ಷಿತ ಮಾಂಸ, ಟೂತ್ಬ್ರೆಷ್, ಸೈಕಲ್, ಪಾದರಕ್ಷೆ, ಬಟ್ಟೆಗಳು, ಹೇರ್ ಆಯಿಲ್, ಟಾಯ್ಲೆಟ್ ಸೋಪ್, ಸೋಪುಗಳು, ಅಡುಗೆ ಸಾಮಗ್ರಿ, ಬೆಡ್ ಶೀಟ್, ಟೂತ್ಪೇಸ್ಟ್, ಮಾರ್ಬಲ್, ಕರಕುಶಲ ವಸ್ತುಗಳು, ಚರ್ಮದ ಉತ್ಪನ್ನಗಳು, ಶಾಂಪೂ, ಕಾರ್ನ್ ಫ್ಲೇಕ್ಸ್, ಉಪ್ಪು, ಟೇಬಲ್, ಕುರ್ಚಿಗಳು, ನವೀಕರಿಸಬಹುದಾದ ಇಂಧನ, ರಸಗೊಬ್ಬರಗಳು, ಇದಷ್ಟೇ ಅಲ್ಲ, ಆಟೋಮೊಬೈಲ್ ಕ್ಷೇತ್ರಕ್ಕೂ ಜಿಎಸ್ಟಿ ಗುಡ್ನ್ಯೂಸ್ ಸಿಕ್ಕಿದೆ.
ಕಾರು, ಬೈಕ್, ಆಟೋಗಳ ಮೇಲಿನ ಜಿಎಸ್ಟಿಯೂ ಇಳಿಕೆಯಾಗಿದೆ. ಸಿಮೆಂಟ್, ಎಲ್ಲ ಮಾದರಿಯ ಟಿವಿ, ಎಸಿ, ಪ್ರಿಡ್ಜ್, 350 ಸಿಸಿ ಒಳಗಿನ ಮೋಟಾರ್ ಸೈಕಲ್, ಸಣ್ಣ ಕಾರುಗಳು, ಟ್ರ್ಯಾಕ್ಟರ್, ಬಸ್, ಟ್ರಕ್, ತ್ರಿಚಕ್ರವಾಹನ, ಆಟೋ ಬಿಡಿ ಭಾಗ, ಇನ್ನು ಕೆಲವು ಉತ್ಪನ್ನಗಳ ಮೇಲಿನ ಜಿಎಸ್ಟಿ ದರವನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಅವುಗಳು ಎಂದರೆ.. ಪಾನ್ ಮಸಾಲ, ಸಿಗರೇಟ್, ತಂಬಾಕು ಪದಾರ್ಥಗಳ ಮೇಲಿನ ಜಿಎಸ್ಟಿಯನ್ನ ಕೇಂದ್ರ ಸರ್ಕಾರ ಶೇಕಡ 40ಕ್ಕೆ ಏರಿಕೆ ಮಾಡಿದೆ. ತಂಪು ಪಾನೀಯಗಳು, ವೈಯಕ್ತಿಕ ಬಳಕೆಯ ವಿಮಾನ, ನಾನ್ ಆಲ್ಕೋಹಾಲ್ ಪಾನೀಯಗಳ ಮೇಲಿನ ಜಿಎಸ್ಟಿ ಏರಿಕೆಯಾಗಿದೆ.
ಇನ್ನೂ ಆರೋಗ್ಯ ವಲಯ ಮತ್ತು ಶೈಕ್ಷಣಿಕ ವಲಯಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ. ಝೀರೋ ಜಿಎಸ್ಟಿ ಘೋಷಣೆ ಮಾಡಿ ಗುಡ್ನ್ಯೂಸ್ ಕೊಟ್ಟಿದೆ. 33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಗಳು, ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು, ಮ್ಯಾಪ್, ಚಾರ್ಟ್, ಗ್ಲೋಬ್ಗಳು, ಪೆನ್ಸಿಲ್ಗಳು, ಶಾರ್ಪನರ್, ಕ್ರಯೋನ್, ನೋಟ್ಬುಕ್ಗಳು, ಪ್ಯಾಸ್ಟೆಲ್ಗಳು, ಎರೇಸರ್ಗೆ ಜಿಎಸ್ಟಿ ಇಲ್ಲ, ಹಾಲು, ಪನೀರ್, ಪಿಜ್ಜಾ, ಬ್ರೆಡ್, ಚಪಾತಿ, ರೋಟಿ.
ಕೇಂದ್ರ ಸರ್ಕಾರದ ಈ ಜಿಎಸ್ಟಿ ಸ್ಲ್ಯಾಬ್ ನವರಾತ್ರಿ ಮೊದಲ ದಿನವಾದ ಸೆಪ್ಟೆಂಬರ್ 22 ರಂದು ಜಾರಿಯಾಗಲಿದೆ. ಈ ಮೂಲಕ ದೇಶವಾಸಿಗಳಿಗೆ ದಸರಾ, ದೀಪಾವಳಿ ಹಬ್ಬಕ್ಕೆ ನರೇಂದ್ರ ಮೋದಿ ಸರ್ಕಾರ ಶುಭ ಸುದ್ದಿ ನೀಡಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…