ಕರಾವಳಿ

ದಕ್ಷಿಣ ಕೊರಿಯಾದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಜಾಂಬೂರಿಗೆ ಶ್ರೀ ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು

01-08-2023 ರಿಂದ 12-08-2023 ರ ವರೆಗೆ ದಕ್ಷಿಣ ಕೊರಿಯಾ ದ sae Mangeum, Jeollabuk -do ದಲ್ಲಿ ನಡೆಯುವ 25ನೇ ವಿಶ್ವ ಸ್ಕೌಟ್ ಜಾಂಬೂರಿ ಗೆ ತೆರಳುವ ಶ್ರೀ ರಾಮಕೃಷ್ಣ ಪ್ರೌಢಶಾಲಾ ದೈಹಿಕ, ಹಾಗೂ ಸ್ಕೌಟ್ ಶಿಕ್ಷಕಿ ಶ್ರೀಮತಿ ಸುನಿತಾ, ಶ್ರೀಮತಿ ಮೈತ್ರೇಯಿ ಅವರೊಂದಿಗೆ ಶಿಲ್ಪಾ, ಪ್ರಾರ್ಥನಾ ಬಂಗಾರಡ್ಕ, ಚಿಂತನ್ ಸಾಲ್ಯಾನ್ ಬಿ, ಸತ್ಯ ಪ್ರಸಾದ್, ಅಕ್ಷಯ್ ಕೃಷ್ಣ, ಅಕ್ಷತ್ ಕುಮಾರ್, ಮೊಹಮ್ಮದ್ ಅರ್ಫನ್ ಶಹನ್, ಅನಿಕೇತ್, ವೃಷಭ್ ಆರ್ ರೈ, ಆಧ್ಯ ಸುಲೋಚನ,ಇರೋಲ್ ಶಮನ್ ಡಿಸೋಜ,ಸೈಲುಸ್ ಅಶಲೈ ಅಲ್ಮೇಡ, ವೈಷ್ಣವಿ, ಸಮೃದ್ಧಿ ಚೌಟ, ಶಿಲ್ಪ ಬಿ, ಶ್ರೀಕೃಷ್ಣ ನಟ್ಟೋಜ, ಧನುಷ್ ರಾಮ್ ಎಮ್, ಇಷಾ ಸುಲೋಚನಾ, ಆಫ್ಝಲ್ ಇವರಿಗೆ ಕಾರ್ಗಿಲ್ ವಿಜಯ ದಿವಸದ ದಿನವಾದ ಇಂದು ಪುತ್ತೂರ್ದ ಮುತ್ತು ಲಯನ್ಸ್ ಕ್ಲಬ್ ಮತ್ತು ಪುತ್ತೂರ್ದ ಮುತ್ತು ಲಿಯೋ ಕ್ಲಬ್ ವತಿಯಿಂದ ಗೌರವಿಸಿ ಬೀಳ್ಕೊಡಲಾಯಿತು.

ಲಯನ್ಸ್ ಅಧ್ಯಕ್ಷ ಎನ್ ರವೀಂದ್ರ ಪೈ ಮಾತನಾಡಿ ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತ. ನಮ್ಮ ದೇಶದ ಮಕ್ಕಳು ದಕ್ಷಿಣ ಕೊರಿಯಾದಲ್ಲಿ ನಡೆಯುವ ಅಂತರಾಷ್ಟ್ರೀಯ ಸ್ಕೌಟ್ ಜಾಂಬೂರಿಯಲ್ಲಿ ಭಾಗವಹಿಸಿ ನಮ್ಮ ದೇಶದ ಸಂಸ್ಕೃತಿ ಸಂಸ್ಕಾರಗಳನ್ನು ಬೇರೆ ದೇಶದ ಮಕ್ಕಳೊಂದಿಗೆ ಹಂಚಿಕೊಂಡು ಅವರ ಸಂಸ್ಕೃತಿ ಸಂಸ್ಕಾರಗಳ ಅಧ್ಯಯನವನ್ನು ಮಾಡಿ ಅನುಭವಗಳನ್ನು ಹೆಚ್ಚಿಸಿಕೊಳ್ಳಲು ಒಂದು ಸದಾವಕಾಶ. ಇದನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿ ಶುಭಹಾರೈಸಿದರು. ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಲ್ಯಾನ್ಸಿ ಮಸ್ಕರೇನಸ್ ಸುರಕ್ಷಿತವಾಗಿ ಹೋಗಿ ತಮ್ಮ ಅನುಭವಗಳನ್ನು ಹೆಚ್ಚಿಸಿಕೊಂಡು ಬಂದು ನಮ್ಮ ಇತರೇ ಮಕ್ಕಳೊಂದಿಗೆ ಅದನ್ನು ಹಂಚಿಕೊಂಡು ಸ್ಕೌಟ್ ಗೆ ಇನ್ನಷ್ಡು ಮಕ್ಕಳು ಸೇರುವಂತಾಗಲಿ ಎಂದು ಶುಭಹಾರೈಸಿದರು. ಜಿಲ್ಲಾ ಲಿಯೋ ಅಧ್ಯಕ್ಷೆ ರಂಜಿತಾ ಶೆಟ್ಟಿ ಮಾತನಾಡಿ ನಾನು ಜಪಾನ್ ನಲ್ಲಿ ನಡೆದ ಜಾಂಬೂರಿಯಲ್ಲಿ ಭಾಗವಹಿಸಿದ ಒಂದು ಒಳ್ಳೆಯ ಅನುಭವ ನನ್ನ ಜೊತೆ ಇದೆ. ಒಂದು ಒಳ್ಳೆಯ ಅವಕಾಶ ನಿಮಗೂ ಲಭಿಸಿದೆ ಇದನ್ನು ಧನಾತ್ಮಕವಾಗಿ ಬಳಸಿಕೊಂಡು ನಿಮ್ಮ ಜೀವನವನ್ನು ಉಜ್ಬಲಗೊಳಿಸಿ ಎಂದು ಹೇಳಿ ಶುಭಹಾರೈಸಿದರು.ಲಯನ್ಸ್ ಸದಸ್ಯ ಭಾಗ್ಯೇಶ್ ರೈ ಮಾತಿನಾಡಿ ಕಾರ್ಗಿಲ್ ವಿಜಯ ದಿವಸವಾದ ಇಂದು ಸಿವಿಲ್ ಸರ್ವೀಸ್ ಮಾಡುತ್ತಿರುವ ಸ್ಕೌಟ್ ಗಳಿಗೆ ಗೌರವಿಸುವ ಅವಕಾಶ ಸಿಕ್ಕಿರುವುದು ತುಂಬಾ ಸಂತಸ ತಂದಿದೆ. ನೀವು ಜಾಂಬೂರಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಯಶಸ್ವಿಯಾಗಿ ಭಾಗವಹಿಸಿ ಬರುವಂತೆ ಭಗವಂತನು ಅನುಗ್ರಹಿಸಲಿ. ನಾನು ಸುಮಾರು 30 ಜನರನ್ನು ನನ್ನ ಸಂಸ್ಥೆ ವಿದ್ಯಾಮಾತಾ ಅಕಾಡಮಿಯ ಮೂಲಕ ಸೈನ್ಯಕ್ಕೆ ಸೇರಿಸುವಲ್ಲಿ ಯಶ್ವಿಯಾಗಿದ್ದೇನೆ. ನೀವೂ ಕೂಡ ಮುಂದಿನ ದಿನಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಹೇಳಿ ಶುಭಹಾರೈಸಿದರು. ಸಂದರ್ಭದಲ್ಲಿ ರವಿಪ್ರಸಾದ್ ಶೆಟ್ಟಿ, ಅಬೂಬಕ್ಕರ್ ಮುಲಾರ್, ತಾಲೂಕು ಸ್ಕೌಟ್ ಅಧ್ಯಕ್ಷ ಶ್ರೀಧರ್ ರೈ , ಕಾರ್ಯದರ್ಶಿ ವಿದ್ಯಾಗೌರಿ, ಉಮಾ ದಿನೇಶ್ ಉಪಸ್ಥಿತರಿದ್ದರು, ಪುತ್ತೂರ್ದ ಮುತ್ತು ಲಿಯೋ ಕ್ಲಬ್ ಅಧ್ಯಕ್ಷರು ಲೆರಿಸ್ಸಾ ಪ್ರಿನ್ಸಿ ಮಸ್ಕರೇನಸ್ ವಂದಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…

10 hours ago

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…

10 hours ago

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…

2 days ago

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…

2 days ago

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…

2 days ago

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…

3 days ago