ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಕೇರಳ ಶಾಲೆಗಳಲ್ಲಿ ಈಗಾಗಲೇ ‘ವಾಟರ್ ಬೆಲ್’ ಕಾರ್ಯಕ್ರಮ ಅನುಷ್ಠಾನದಲ್ಲಿದ್ದು, ದಿನಕ್ಕೆ ಎರಡು ಬಾರಿ ಕೇರಳದ ಶಾಲೆಗಳಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯಬೇಕು. ಕೇರಳದಲ್ಲಿ ಪ್ರಾರಂಭ ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆಯಿದೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…