ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಂದರ್ ಬಾಹರ್, ಇಸ್ಪೀಟ್, ಜುಗಾರಿ ಆಡುತ್ತಿದ್ದ 11ಮಂದಿ ಪೊಲೀಸರ ವಶ…!

ಉಡುಪಿ ಜಿಲ್ಲೆಯ ಬ್ರಹ್ಮಾವರದ ಲಾಡ್ಜ್ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದ 11ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೇರಾಡಿ ಗ್ರಾಮದ ರಶ್ಮಿ ಬಾರ್ ಆಂಡ್ ಲಾಡ್ಜ್ ಕಟ್ಟಡದ 2ನೇ ಮಹಡಿಯ ರೂಮ್ ನಂಬ್ರ 203 ರಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ವೇಳೆ ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದು, ಉತ್ತರಕನ್ನಡದ ವಿಶ್ವನಾಥ ಪೂಜಾರಿ ಭಟ್ಕಳ, ಬ್ರಹ್ಮಾವರ ಶಿರಿಯಾರ ನಿವಾಸಿ ಗಣೇಶ್ ಪೂಜಾರಿ, ವಾರಂಬಳ್ಳಿಯ ಕೇಶವ, ಉಳ್ಳೂರು ಗ್ರಾಮದ ಪ್ರಭಾಕರ ಶೆಟ್ಟಿ, ಕೋಟೇಶ್ವರ ಹಳವಳ್ಳಿಯ ಜಯರಾಜ್, ಸಾಲಿಗ್ರಾಮ ಪಾರಂಪಳ್ಳಿ ನಿವಾಸಿ ರಾಜು ಪೂಜಾರಿ, ಸೈಬ್ರಕಟ್ಟೆಯ ರಾಜೀವ್ ಶೆಟ್ಟಿ, ಸಾಲಿಗ್ರಾಮ ಕಾರ್ಕಡ ನಿವಾಸಿಗಳಾದ ರತ್ನಾಕರ, ಪ್ರಶಾಂತ್, ಕೋಟತಟ್ಟು ಗ್ರಾಮದ ಹರೀಶ್ ಮೋಗವೀರ ಹಾಗೂ ಸಿದ್ದಾಪುರ ತಾಲೂಕಿನ ನಿಡಗೋಡು ನಿವಾಸಿ ಲೋಹಿತ್ ಕುಪ್ಪಸ್ವಾಮಿ ಭೋವಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಹಣವನ್ನು ಪಣವನ್ನಾಗಿ ಇಟ್ಟುಕೊಂಡು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಗಳಿಂದ ಒಟ್ಟು ನಗದು ರೂ. 21080, ದ್ವಿಚಕ್ರ ವಾಹನಗಳನ್ನು ಸ್ವಾಧೀನಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!