ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20), ಹೆಜಮಾಡಿ ಕನ್ನಂಗಾರ್ ನಿವಾಸಿ ಅಹಮದ್ ಅನ್ವೀಜ್(20), ಬಂಟ್ವಾಳ ನಿವಾಸಿ ಸಪ್ವಾನ್(30), ಮತ್ತು ತಾಸೀರ್ (31) ಎಂದು ಗುರುತಿಸಲಾಗಿದೆ. ಕಾಪು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್(54) ಎಂಬವರಿಗೆ ಫೇಸ್ ಬುಕ್ ಮೂಲಕ ಆರೋಪಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿತ್ತು. 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬರನ್ನು ನೀಡಿ ಎಫ್ಎಕ್ಸ್ಸಿಎಮ್ ಗೋಲ್ಡ್ ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಮೆಸೇಜ್ ಮಾಡಿದ್ದು, ಅದನ್ನು ನಂಬಿದ ಜೊಸ್ಸಿ ತಮ್ಮ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 75,00,000/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಈ ಬಗ್ಗೆ ಜೊಸ್ಸಿ ರವೀಂದ್ರ ಡಿಕ್ರೂಸ್ ಅವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಗೆ ಇಳಿದ ಪೊಲೀಸರ ವಿಶೇಷ ತಂಡವು ಆರೋಪಿಗಳನ್ನು ಬಂಧಿಸಿ ಅವರಿಂದ ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ 4,00,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸದ್ರಿ ಪ್ರಕರಣದ ಇತರ ಆರೋಪಿಗಳು ತಲೆಮರೆಸಿ ಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…