ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು.
ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59ವ) ಅವರು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು. ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.
65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರು ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರುವಾಗಿ ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು.
ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…