ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು.
ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59ವ) ಅವರು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು. ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.
65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರು ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರುವಾಗಿ ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು.
ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…