ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: “ಭವತಿ ಬಿಕ್ಷಾ ದೇಹಿ” ಹೋರಾಟದ ಮೂಲಕ, ಸರಕಾರದ ಗಮನಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದೇವೆ; ಎಂ.ತುಂಗಪ್ಪ

“ಸರಕಾರಕ್ಕೆ ಮತಿಯಿಲ್ಲ- ಕಾರ್ಮಿಕರಿಗೆ ಗತಿಯಿಲ್ಲ!!!! ” ಭವತಿ ಬಿಕ್ಷಾಂ ದೇಹಿ” ಎಂಬ ಸ್ಲೋಗನ್ ನಡಿ “ಬಡ ಕಾರ್ಮಿಕರ ಧ್ವನಿಯಾಗಿ” ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರರವರ ನೇತ್ರತ್ವದಲ್ಲಿ ಸೆ.11 ರಂದು ಗುರುವಾರ ಪುಂಜಾಲಕಟ್ಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಳೆದ 5 ತಿಂಗಳಿನಿಂದ ದ.ಕ.ಜಿಲ್ಲೆಯ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮರುಳು ಮತ್ತು ಕೆಂಪು ಕಲ್ಲು ಇಲ್ಲದೆ ಕಾರ್ಮಿಕರು ಊಟಕ್ಕಾಗಿ ಪರದಾಡುವ ಪರಿಸ್ಥಿತಿ ಉದ್ಭವವಾಗಿದೆ. ಅದಕೋಸ್ಕರ “ಭವತಿ ಬಿಕ್ಷಾ ದೇಹಿ” ಎನ್ನುವ ಹೋರಾಟದ ಮೂಲಕ, ಸರಕಾರದ ಗಮನಕ್ಕೆ ತರುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ಮಡಂತ್ಯಾರುವಿನಿಂದ ಪುಂಜಾಲಕಟ್ಟೆವರೆಗೆ ಪಾದಯಾತ್ರೆ ಮೂಲಕ ಸಾಗಿ ಪುಂಜಾಲಕಟ್ಟೆ ಆರಕ್ಷಕ ಠಾಣೆಯಲ್ಲಿ ಠಾಣಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಅ ದಿನ ಎಲ್ಲಾ ಅಂಗಡಿ ಮುಂಗಟ್ಟು ಗಳನ್ನು ಬೆಳಿಗ್ಗೆ 9-00ರಿಂದ 11-00 ರ ವರೆಗೆ ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಸಹಕರಿಸಿಕರಿಸುವಂತೆ ಮತ್ತು ಕಾರ್ಯಕ್ರಮದ ಮುನ್ನ ಬೆಳಿಗ್ಗೆ 9-00ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನ ವಠಾರ ದಲ್ಲಿ ಸೇರುವಂತೆ ಕೂಡ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!