ಉಪ್ಪಿನಂಗಡಿ ಸಮೀಪದ ಕಡಂಬು ಎಂಬಲ್ಲಿ ಕೃಷಿಕರೊಬ್ಬರ ಮನೆಯಿಂದ ದನವನ್ನು ಕದ್ದು ಬಳಿಕ ಅವರ ಜಾಗದಲ್ಲೇ ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್, ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ ಮತ್ತು ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ ಎಂದು ಗುರುತಿಸಲಾಗಿದೆ. ಆರೋಪಿಗಳ ಮೇಲೆ ಅಗಸ್ಟ್ 14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳ್ಳತನ ಮಾಡಿ ಬಳಿಕ ಅದನ್ನು ಅಲ್ಲೇ ಪರಿಸರದಲ್ಲಿ ಮಾಂಸ ಮಾಡಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮೂವರ ವಿಚಾರಣೆ ನಡೆಸಿದಾಗ ಉಪ್ಪಿನಂಗಡಿ ಸಮೀಪದ ಕಡಂಬು ಎಂಬಲ್ಲಿ ದನ ಕಳ್ಳತನ ಮಾಡಿ ಬಳಿಕ ಅಲ್ಲೆ ಅದನ್ನು ಕಡಿದು ಅದರ ಮಾಂಸವನ್ನು ಕೊಂಡೊಯ್ದ ಪ್ರಕರಣದಲ್ಲೂ ಇವರೇ ಆರೋಪಿಗಳು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…