ಉಪ್ಪಿನಂಗಡಿ ಸಮೀಪದ ಕಡಂಬು ಎಂಬಲ್ಲಿ ಕೃಷಿಕರೊಬ್ಬರ ಮನೆಯಿಂದ ದನವನ್ನು ಕದ್ದು ಬಳಿಕ ಅವರ ಜಾಗದಲ್ಲೇ ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್, ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ ಮತ್ತು ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ ಎಂದು ಗುರುತಿಸಲಾಗಿದೆ. ಆರೋಪಿಗಳ ಮೇಲೆ ಅಗಸ್ಟ್ 14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳ್ಳತನ ಮಾಡಿ ಬಳಿಕ ಅದನ್ನು ಅಲ್ಲೇ ಪರಿಸರದಲ್ಲಿ ಮಾಂಸ ಮಾಡಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮೂವರ ವಿಚಾರಣೆ ನಡೆಸಿದಾಗ ಉಪ್ಪಿನಂಗಡಿ ಸಮೀಪದ ಕಡಂಬು ಎಂಬಲ್ಲಿ ದನ ಕಳ್ಳತನ ಮಾಡಿ ಬಳಿಕ ಅಲ್ಲೆ ಅದನ್ನು ಕಡಿದು ಅದರ ಮಾಂಸವನ್ನು ಕೊಂಡೊಯ್ದ ಪ್ರಕರಣದಲ್ಲೂ ಇವರೇ ಆರೋಪಿಗಳು ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…