ಜನ ಮನದ ನಾಡಿ ಮಿಡಿತ

Advertisement

ಉಡುಪಿ: “ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ- ಪೊಲೀಸರ ದಾಳಿ”

ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!