ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…