ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…