ಉಡುಪಿ ಜಿಲ್ಲೆಯ ಕೆಂಜೂರು ಗ್ರಾಮದ ಬಲ್ಲೇಬೈಲು ಎಂಬ ಸರಕಾರಿ ಜಾಗದಲ್ಲಿ ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕ ಆಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವರು ಗುಂಪು ಸೇರಿ ಕೋಳಿಗಳ ಕಾಲಿಗೆ ಬಾಳ್ ಕಟ್ಟಿ ಹಿಂಸ್ಮಾತಕವಾಗಿ ಅವುಗಳು ಕಾದಾಡುವಂತೆ ಮಾಡಿ ಅವುಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭಗಳಿಸುತ್ತಿರುವುದು ಕಂಡು ಬಂದಿದ್ದು ಪೊಲೀಸ್ ಇಲಾಖೆ ಅಲ್ಲಿಗೆ ದಾಳಿ ಮಾಡಿದ್ದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದವರು ಕೋಳಿಗಳ ಕಾದಾಟವನ್ನು ನೋಡುತ್ತಾ ಕೋಳಿ ಅಂಕ ಜುಗಾರಿ ಆಟದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಂಡು ಬ್ರಹ್ಮಾವರ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಜನರು ಓಡಿಹೋಗಿದ್ದು, ಸಿಬ್ಬಂದಿಯವರ ಸಹಾಯದಿಂದ ಓಡಿ ಹೋಗುತ್ತಿದ್ದವರ ಪೈಕಿ ಇಬ್ಬರನ್ನು ಹಿಡಿದು ವಿಚಾರಿಸಲಾಗಿದೆ. ಪ್ರವೀಣ್ ಶೆಟ್ಟಿ ಮತ್ತುರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದು, ಅವರಿಂದ ಆಟಕ್ಕೆ ಬಳಸಿದ ನಗದು 26030/- ರೂ ಹಾಗೂ ಸ್ಥಳದಲ್ಲಿ ಜೂಜಿಗೆ ಕಟ್ಟಿದ 2 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಪಂಚರ ಸಮಕ್ಷಮ ವಶಪಡಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…