ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಹತ್ಯೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!