ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…