ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…