ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…