ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಾಂಪೌಂರ್ಟ್ ನಲ್ಲಿ ತಂಗಿದ್ದು, 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ. ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು, ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರ ಸ್ಥಿತಿಯಲ್ಲಿದ್ದು, ತಕ್ಷಣವೇ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೊರ್ವ ನಾಪತ್ತೆ ಆಗಿದ್ದು, ಆತನ ಪತ್ತೆಗಾಗಿ ಹುಡುಕಾಟ ಮುಂದುವರಿದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…