ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ರವರು ಮಾತನಾಡಿ ಹುಣಸೂರು, ಪಿರಿಯಾಪಟ್ಟಣ, ಎಚ್ ಡಿ ಕೋಟೆ, ಸರಗೂರು, ಸಾಲಿಗ್ರಾಮ, ಕೆ ಆರ್ ನಗರ ಈ ಆರು ತಾಲೂಕುಗಳಿಗೆ ಹುಣಸೂರು ಉಪವಿಭಾಗ ಕೇಂದ್ರವಾಗಿದ್ದು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆಗಳಿದ್ದು ಈ ಆರು ತಾಲೂಕುಗಳಿಂದ ಸಾವಿರಾರು ಜನ ತಮ್ಮ ಕೆಲಸ ಕಾರ್ಯಗಳಿಗೆ ಬರುತ್ತಿದ್ದಾರೆ.
ಹಾಗೂ ರಾಷ್ಟ್ರೀಯ ಹೆದ್ದಾರಿಯೂ ನಗರದ ಮಧ್ಯ ಭಾಗದಲ್ಲಿ ಹಾದುಹೋಗಿರುವುದರಿಂದ ಹೈಟೆಕ್ ಶೌಚಾಲಯಗಳ ಅವಶ್ಯಕತೆ ಅಗತ್ಯವಾಗಿ ಬೇಕಾಗಿದೆ. ಆದರೆ ಸರಿಯಾದ ಒಂದು ಹೈಟೆಕ್ ಶೌಚಾಲಯವಿಲ್ಲದೆ ಸಾರ್ವಜನಿಕರು ಬಹಳ ತೊಂದರೆ ಪಡುತ್ತಿದ್ದಾರೆ. ಅದರಲ್ಲೂ ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರು, ಮಹಿಳೆಯರು ಬೆಳಗ್ಗಿನಿಂದ ಸಂಜೆವರೆಗೂ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಹುಣಸೂರಿಗೆ ಬಂದು ಹೋಗುತ್ತಿದ್ದಾರೆ. ಆದರೆ ಸರಿಯಾದ ಹೈಟೆಕ್ ಶೌಚಾಲಯವಿಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ಇದೆ. ನಗರದ ಕೆಲವು ಕಡೆ ಶೌಚಾಲಯಗಳು ಇದ್ದರೂ ಸಹ ಅದನ್ನು ಸರಿಯಾಗಿ ನಿರ್ವಹಣೆ ಮಾಡದೆ ಅನೈರ್ಮಲ್ಯದಿಂದ ಕೂಡಿದ್ದು ಸಾರ್ವಜನಿಕರು ಈ ಶೌಚಾಲಯವನ್ನು ಬಳಸಲು ಹಿಂದೇಟು ಹಾಕುತ್ತಿದ್ದಾರೆ, ನಗರಸಭೆಗೆ ಕೋಟ್ಯಾಂತರ ರೂ.ಗಳ ಕಂದಾಯದ ಹಣ ಹರಿದು ಬರುತ್ತಿದ್ದರು ಸಹ ನಗರದಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸದೆ ಇರುವುದು ಹಾಗೂ ಜನಪ್ರತಿನಿಧಿಗಳು ಸಹ ಸಾರ್ವಜನಿಕರ ಸುರಕ್ಷತೆಗೆ ಕ್ರಮ ವಹಿಸದೆ ಇರುವುದು ಹುಣಸೂರಿನ ತಾಲೂಕು ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪಕ್ಕದ ಕೆ ಆರ್ ನಗರದ ಪ್ರಮುಖ ಸ್ಥಳಗಳಲ್ಲಿ ಹೈಟೆಕ್ ಶೌಚಾಲಯವನ್ನು ನಿರ್ಮಿಸಿ ಅದನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸದಿದ್ದಲ್ಲಿ ನಗರಸಭೆಯ ಮುಂಭಾಗದಲ್ಲಿ ಸಾರ್ವಜನಿಕರೊಂದಿಗೆ ಸತ್ಯ ಎಂಎ ಎಸ್ ಫೌಂಡೇಶನ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…