ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ ಈ ಹಿಂದೆ ಇದ್ದ ಡಾ ಜೋಗೆಂದ್ರನಾಥ್ 24*7 ದಿನದ 24 ಗಂಟೆಗಳ ಕಾಲವೂ ರೋಗಿಗಳಿಗೆ ಲಭ್ಯವಿದ್ದರು. ಆದರೆ ಅವರ ಸೇವಾವಧಿ ಮುಗಿದ ಕಾರಣ ಹೊಸದಾಗಿ ವೈದ್ಯರನ್ನು ನೇಮಕ ಮಾಡಲಾಗಿದ್ದು ಸದರಿ ಇರುವ ವೈದ್ಯರು ಮಧ್ಯಾಹ್ನ 12 ಗಂಟೆಯಿ0ದ ಸಾಯಂಕಾಲ 8:00 ವರೆಗೆ ಆಸ್ಪತ್ರೆಯಲ್ಲಿದ್ದು ಇನ್ನುಳಿದ ಸಮಯದಲ್ಲಿ ವೈದ್ಯರಿಲ್ಲದೆ ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಗಂಟೆಗಳ ಕಾಲ ಚಿಕಿತ್ಸೆಗಾಗಿ ಕಾದು ಕಾದು ಹೈರಾಣಾಗುವ ಸ್ಥಿತಿ ಉಂಟಾಗಿದೆ.
ಮೊದಲೇ ಹನಗೋಡು ಭಾಗದಲ್ಲಿ ಅಪಾರ ಮಳೆಯಿಂದ ಜನಗಳಿಗೆ ವೈರಲ್ ಫೀವರ್, ಟೈಫಾಯಿಡ್ ಅಂತಹ ಜ್ವರಗಳು ಹೆಚ್ಚಾಗಿ ಕಂಡುಬರುತ್ತಿರುವುದರಿ0ದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಆಸ್ಪತ್ರೆಯಲ್ಲಿ ರಾತ್ರಿ 7:00 ರಿಂದ ಬೆಳಗ್ಗೆ 12 ಗಂಟೆಗೆ ವರೆಗೆ ವೈದ್ಯರಿಗಾಗಿ ಕಾಯಬೇಕಾಗಿದೆ. ಸುಮಾರು 43 ರಿಂದ 45 ಹಳ್ಳಿಗಳಿಂದ ಕೂಡಿರುವ ಹನಗೋಡು ಹೋಬಳಿಯಲ್ಲಿ ಹಾಡಿ ಜನಗಳು ಹೆಚ್ಚಾಗಿದ್ದು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರು ವೈದ್ಯರ ಅವಶ್ಯಕತೆ ಇದ್ದು ಸದ್ಯದಲ್ಲೇ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದರ ಬಗ್ಗೆ ಗಮನವಹಿಸಿ ಮತ್ತೋರ್ವ ವೈದ್ಯರನ್ನು ನೇಮಕ ಮಾಡಿಕೊಡಬೇಕು ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಜೊತೆಗೆ ಆಸ್ಪತ್ರೆಯಲ್ಲಿ ಕಫ ಪರೀಕ್ಷೆ, ರಕ್ತ ಪರೀಕ್ಷೆ ಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರವನ್ನು ಆರಂಭಿಸಬೇಕು. ಹಾಗೂ ಈಗ ನೇಮಕ ಮಾಡಿರುವ ವೈದ್ಯರು ಡೇ ಸಮಯದಲ್ಲಿ ಬೆಳಿಗ್ಗೆ 10:00 ಗಂಟೆಯಿ0ದ ರಾತ್ರಿ 7:00 ವರಿಗಾದರೂ ಚಿಕಿತ್ಸೆ ನೀಡಬೇಕು ಎಂದು ಜನಗಳು ಮನವಿ ಮಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…