ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ ಈ ಹಿಂದೆ ಇದ್ದ ಡಾ ಜೋಗೆಂದ್ರನಾಥ್ 24*7 ದಿನದ 24 ಗಂಟೆಗಳ ಕಾಲವೂ ರೋಗಿಗಳಿಗೆ ಲಭ್ಯವಿದ್ದರು. ಆದರೆ ಅವರ ಸೇವಾವಧಿ ಮುಗಿದ ಕಾರಣ ಹೊಸದಾಗಿ ವೈದ್ಯರನ್ನು ನೇಮಕ ಮಾಡಲಾಗಿದ್ದು ಸದರಿ ಇರುವ ವೈದ್ಯರು ಮಧ್ಯಾಹ್ನ 12 ಗಂಟೆಯಿ0ದ ಸಾಯಂಕಾಲ 8:00 ವರೆಗೆ ಆಸ್ಪತ್ರೆಯಲ್ಲಿದ್ದು ಇನ್ನುಳಿದ ಸಮಯದಲ್ಲಿ ವೈದ್ಯರಿಲ್ಲದೆ ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಗಂಟೆಗಳ ಕಾಲ ಚಿಕಿತ್ಸೆಗಾಗಿ ಕಾದು ಕಾದು ಹೈರಾಣಾಗುವ ಸ್ಥಿತಿ ಉಂಟಾಗಿದೆ.
ಮೊದಲೇ ಹನಗೋಡು ಭಾಗದಲ್ಲಿ ಅಪಾರ ಮಳೆಯಿಂದ ಜನಗಳಿಗೆ ವೈರಲ್ ಫೀವರ್, ಟೈಫಾಯಿಡ್ ಅಂತಹ ಜ್ವರಗಳು ಹೆಚ್ಚಾಗಿ ಕಂಡುಬರುತ್ತಿರುವುದರಿ0ದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಆಸ್ಪತ್ರೆಯಲ್ಲಿ ರಾತ್ರಿ 7:00 ರಿಂದ ಬೆಳಗ್ಗೆ 12 ಗಂಟೆಗೆ ವರೆಗೆ ವೈದ್ಯರಿಗಾಗಿ ಕಾಯಬೇಕಾಗಿದೆ. ಸುಮಾರು 43 ರಿಂದ 45 ಹಳ್ಳಿಗಳಿಂದ ಕೂಡಿರುವ ಹನಗೋಡು ಹೋಬಳಿಯಲ್ಲಿ ಹಾಡಿ ಜನಗಳು ಹೆಚ್ಚಾಗಿದ್ದು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರು ವೈದ್ಯರ ಅವಶ್ಯಕತೆ ಇದ್ದು ಸದ್ಯದಲ್ಲೇ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದರ ಬಗ್ಗೆ ಗಮನವಹಿಸಿ ಮತ್ತೋರ್ವ ವೈದ್ಯರನ್ನು ನೇಮಕ ಮಾಡಿಕೊಡಬೇಕು ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಜೊತೆಗೆ ಆಸ್ಪತ್ರೆಯಲ್ಲಿ ಕಫ ಪರೀಕ್ಷೆ, ರಕ್ತ ಪರೀಕ್ಷೆ ಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರವನ್ನು ಆರಂಭಿಸಬೇಕು. ಹಾಗೂ ಈಗ ನೇಮಕ ಮಾಡಿರುವ ವೈದ್ಯರು ಡೇ ಸಮಯದಲ್ಲಿ ಬೆಳಿಗ್ಗೆ 10:00 ಗಂಟೆಯಿ0ದ ರಾತ್ರಿ 7:00 ವರಿಗಾದರೂ ಚಿಕಿತ್ಸೆ ನೀಡಬೇಕು ಎಂದು ಜನಗಳು ಮನವಿ ಮಾಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…