ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ ಈ ಹಿಂದೆ ಇದ್ದ ಡಾ ಜೋಗೆಂದ್ರನಾಥ್ 24*7 ದಿನದ 24 ಗಂಟೆಗಳ ಕಾಲವೂ ರೋಗಿಗಳಿಗೆ ಲಭ್ಯವಿದ್ದರು. ಆದರೆ ಅವರ ಸೇವಾವಧಿ ಮುಗಿದ ಕಾರಣ ಹೊಸದಾಗಿ ವೈದ್ಯರನ್ನು ನೇಮಕ ಮಾಡಲಾಗಿದ್ದು ಸದರಿ ಇರುವ ವೈದ್ಯರು ಮಧ್ಯಾಹ್ನ 12 ಗಂಟೆಯಿ0ದ ಸಾಯಂಕಾಲ 8:00 ವರೆಗೆ ಆಸ್ಪತ್ರೆಯಲ್ಲಿದ್ದು ಇನ್ನುಳಿದ ಸಮಯದಲ್ಲಿ ವೈದ್ಯರಿಲ್ಲದೆ ಹಿರಿಯ ನಾಗರಿಕರು, ಮಕ್ಕಳು, ಮಹಿಳೆಯರು ಗಂಟೆಗಳ ಕಾಲ ಚಿಕಿತ್ಸೆಗಾಗಿ ಕಾದು ಕಾದು ಹೈರಾಣಾಗುವ ಸ್ಥಿತಿ ಉಂಟಾಗಿದೆ.
ಮೊದಲೇ ಹನಗೋಡು ಭಾಗದಲ್ಲಿ ಅಪಾರ ಮಳೆಯಿಂದ ಜನಗಳಿಗೆ ವೈರಲ್ ಫೀವರ್, ಟೈಫಾಯಿಡ್ ಅಂತಹ ಜ್ವರಗಳು ಹೆಚ್ಚಾಗಿ ಕಂಡುಬರುತ್ತಿರುವುದರಿ0ದ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಆಸ್ಪತ್ರೆಯಲ್ಲಿ ರಾತ್ರಿ 7:00 ರಿಂದ ಬೆಳಗ್ಗೆ 12 ಗಂಟೆಗೆ ವರೆಗೆ ವೈದ್ಯರಿಗಾಗಿ ಕಾಯಬೇಕಾಗಿದೆ. ಸುಮಾರು 43 ರಿಂದ 45 ಹಳ್ಳಿಗಳಿಂದ ಕೂಡಿರುವ ಹನಗೋಡು ಹೋಬಳಿಯಲ್ಲಿ ಹಾಡಿ ಜನಗಳು ಹೆಚ್ಚಾಗಿದ್ದು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರು ವೈದ್ಯರ ಅವಶ್ಯಕತೆ ಇದ್ದು ಸದ್ಯದಲ್ಲೇ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದರ ಬಗ್ಗೆ ಗಮನವಹಿಸಿ ಮತ್ತೋರ್ವ ವೈದ್ಯರನ್ನು ನೇಮಕ ಮಾಡಿಕೊಡಬೇಕು ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಜೊತೆಗೆ ಆಸ್ಪತ್ರೆಯಲ್ಲಿ ಕಫ ಪರೀಕ್ಷೆ, ರಕ್ತ ಪರೀಕ್ಷೆ ಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರವನ್ನು ಆರಂಭಿಸಬೇಕು. ಹಾಗೂ ಈಗ ನೇಮಕ ಮಾಡಿರುವ ವೈದ್ಯರು ಡೇ ಸಮಯದಲ್ಲಿ ಬೆಳಿಗ್ಗೆ 10:00 ಗಂಟೆಯಿ0ದ ರಾತ್ರಿ 7:00 ವರಿಗಾದರೂ ಚಿಕಿತ್ಸೆ ನೀಡಬೇಕು ಎಂದು ಜನಗಳು ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…