ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪರಿಹಾರ ಮೊತ್ತಕ್ಕಾಗಿ ಪತಿ ಕೊಂದು ಹುಲಿ ಕೊಂದ ಕತೆ ಕಟ್ಟಿದ ಚಲಾಕಿ ಪತ್ನಿ

ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ತಾಲ್ಲೂಕಿನ ಚಿಕ್ಕಹೆಜ್ಜೂರು ಸಮೀಪ ನಡೆದಿದೆ.

ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು ಕದಂಪುರ ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಸಲ್ಲಾಪುರಿ (40) ಯನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ದೊರೆಯುವ 15 ಲಕ್ಷ ರೂ. ಪರಿಹಾರ ಮೊತ್ತ ಪಡೆಯಲು ಸಂಚು ರೂಪಿಸಿದ ಸಲ್ಲಾಪುರಿ, ಪತಿಯನ್ನು ಹತ್ಯೆಗೈದು ಹುಲಿ ಕೊಂದಿರುವ ಕಥೆ ಕಟ್ಟಿ ಪೊಲೀಸರನ್ನ ಯಾಮಾರಿಸಲು ಯತ್ನಿಸಿದ್ದಾಳೆ. ಹುಣಸೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ತಂಡ ನಡೆಸಿದ ಖಡಕ್ ತೆನಿಖೆಯಲ್ಲಿ ಪತ್ನಿಯ ಸಂಚು ಬಯಲಾಗಿದೆ. ಪತಿಯನ್ನ ಹತ್ಯೆಗೈದ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಹುಣಸೂರು ತಾಲೂಕಿನ ಹನಗೂಡು ಹೋಬಳಿಯ ಚಿಕ್ಕಹೆಜ್ಜೂರಿನ ಹಾಡಿಯಲ್ಲಿ(ಇದು ನಾಗರಹೊಳೆ ಕಾಡಿಂಚಿನ ಲ್ಲಿರುವ ಜಮೀನು) ಬೆಂಗಳೂರಿನ ಬಿಡದಿಯ ಅರುಣ್, ರವಿ ಮತ್ತಿಬ್ಬರು ಸ್ನೇಹಿತರು ಸೇರಿ 4-10 ಗುಂಟೆ ಜಮೀನನ್ನು ಖರೀದಿಸಿದ್ದರು. ಜಮೀನನ್ನು ನೋಡಿಕೊಳ್ಳಲು ಈ ದಂಪತಿಗಳನ್ನು ನೇಮಿಸಿದ್ದರು. ಜೀವನದಲ್ಲಿ ಐಷಾರಾಮಿ ಕನಸು ಕಾಣುತ್ತಿದ್ದ ಈಕೆ ಸರ್ಕಾರದ ಯೋಜನೆಗಳಲ್ಲಿ ಹಣ ಪಡೆಯುವ ಉದ್ದೇಶಗಳನ್ನ ಇಟ್ಟುಕೊಂಡು ಆಗಾಗ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಳು. ಕಾಡುಪ್ರಾಣಿಗಳ ದಾಳಿಯಲ್ಲಿ ಮೃತಪಟ್ಟರೆ 15 ಲಕ್ಷ ಪರಿಹಾರ ದೊರೆಯವ ಯೋಜನೆಯ ಮಾಹಿತಿ ಈಕೆಗೆ ದೊರೆತಿದೆ. ಪತಿಯನ್ನು ಕೊಲೆಗೈಯ್ಯುವ ಸ್ಕೆಚ್ ತಯಾರಿಸಿದ ಸಲ್ಲಾಪುರಿ ಕಳೆದ ಮಂಗಳವಾರ ಪತ್ನಿಗೆ ವಿಷ ಹಾಕಿ ಕೊಂದಿದ್ದಾಳೆ. ನಂತರ ಮನೆಯಿಂದ ಮೃತದೇಹವನ್ನ ಹೊರಕ್ಕೆ ಎಳೆದೊಯ್ದು ವಿರೂಪಗೊಳಿಸಿ ಗುಂಡಿಯಲ್ಲಿ ಮುಚ್ಚಿಹಾಕಿ ಕಾಡು ಪ್ರಾಣಿ ದಾಳಿಯಿಂದ ಮೃತಪಟ್ಟಂತೆ ಬಿಂಬಿಸಿದ್ದಾಳೆ. ನಂತರ ಠಾಣೆಗೆ ಆಗಮಿಸಿ ಪತಿ ನಾಪತ್ತೆಯಾದ ಬಗ್ಗೆ ಮಿಸ್ಸಿಂಗ್ ಕಂಪ್ಲೇ0ಟ್ ಕೊಟ್ಟಿದ್ದಾಳೆ. ದೂರಿನಲ್ಲಿ ಹುಲಿ ಎಳೆದೊಯ್ದಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಸಲ್ಲಾಪುರಿ ಮಾತನ್ನ ನಂಬಿದ ಪೊಲೀಸರು ಸ್ಥಳಕ್ಕೆ ಹೋಗಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ಹುಡುಕಾಟ ನಡೆಸಿದ್ದಾರೆ. ಹುಲಿ ದಾಳಿ ನಡೆಸಿದ ಯಾವುದೇ ಕುರುಹುಗಳು ಪೊಲೀಸರಿಗೆ ಸಿಕ್ಕಿಲ್ಲ. ಮಳೆ ಸುರಿದ ಕಾರಣ ಕುರುಹುಗಳು ನಾಶವಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಆದರೆ ಸಿಸಿ ಕ್ಯಾಮರಾದಲ್ಲಿ ಕೇವಲ ಪತ್ನಿ ಸಲ್ಲಾಪುರಿ ಮಾತ್ರ ಓಡಾಡಿರುವುದು ಕಂಡು ಬಂದಿದೆ. ಇನ್ ಸ್ಪೆಕ್ಟರ್ ಮುನಿಯಪ್ಪ ರವರು ಸಲ್ಲಾಪುರಿಯನ್ನು ತಿರ್ವ ವಿಚಾರಣೆಗೆ ಒಳಪಡಿಸಿದಾಗ ವಿಷ ಕೊಟ್ಟು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ಸಿಗುವ 15 ಲಕ್ಷ ಪರಿಹಾರ ಹಣ ಪಡೆಯುವ ಹುನ್ನಾರದಿಂದ ಕೃತ್ಯ ನಡೆಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್ ಹಾಗೂ ಡಿವೈಎಸ್ಪಿ ಗೋಪಾಲ ಕೃಷ್ಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ, ರಾಧಾ, ಮಂಜು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!