ಜನ ಮನದ ನಾಡಿ ಮಿಡಿತ

Advertisement

ಪರಿಹಾರ ಮೊತ್ತಕ್ಕಾಗಿ ಪತಿ ಕೊಂದು ಹುಲಿ ಕೊಂದ ಕತೆ ಕಟ್ಟಿದ ಚಲಾಕಿ ಪತ್ನಿ

ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ತಾಲ್ಲೂಕಿನ ಚಿಕ್ಕಹೆಜ್ಜೂರು ಸಮೀಪ ನಡೆದಿದೆ.

ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು ಕದಂಪುರ ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಸಲ್ಲಾಪುರಿ (40) ಯನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ದೊರೆಯುವ 15 ಲಕ್ಷ ರೂ. ಪರಿಹಾರ ಮೊತ್ತ ಪಡೆಯಲು ಸಂಚು ರೂಪಿಸಿದ ಸಲ್ಲಾಪುರಿ, ಪತಿಯನ್ನು ಹತ್ಯೆಗೈದು ಹುಲಿ ಕೊಂದಿರುವ ಕಥೆ ಕಟ್ಟಿ ಪೊಲೀಸರನ್ನ ಯಾಮಾರಿಸಲು ಯತ್ನಿಸಿದ್ದಾಳೆ. ಹುಣಸೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ತಂಡ ನಡೆಸಿದ ಖಡಕ್ ತೆನಿಖೆಯಲ್ಲಿ ಪತ್ನಿಯ ಸಂಚು ಬಯಲಾಗಿದೆ. ಪತಿಯನ್ನ ಹತ್ಯೆಗೈದ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಹುಣಸೂರು ತಾಲೂಕಿನ ಹನಗೂಡು ಹೋಬಳಿಯ ಚಿಕ್ಕಹೆಜ್ಜೂರಿನ ಹಾಡಿಯಲ್ಲಿ(ಇದು ನಾಗರಹೊಳೆ ಕಾಡಿಂಚಿನ ಲ್ಲಿರುವ ಜಮೀನು) ಬೆಂಗಳೂರಿನ ಬಿಡದಿಯ ಅರುಣ್, ರವಿ ಮತ್ತಿಬ್ಬರು ಸ್ನೇಹಿತರು ಸೇರಿ 4-10 ಗುಂಟೆ ಜಮೀನನ್ನು ಖರೀದಿಸಿದ್ದರು. ಜಮೀನನ್ನು ನೋಡಿಕೊಳ್ಳಲು ಈ ದಂಪತಿಗಳನ್ನು ನೇಮಿಸಿದ್ದರು. ಜೀವನದಲ್ಲಿ ಐಷಾರಾಮಿ ಕನಸು ಕಾಣುತ್ತಿದ್ದ ಈಕೆ ಸರ್ಕಾರದ ಯೋಜನೆಗಳಲ್ಲಿ ಹಣ ಪಡೆಯುವ ಉದ್ದೇಶಗಳನ್ನ ಇಟ್ಟುಕೊಂಡು ಆಗಾಗ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಳು. ಕಾಡುಪ್ರಾಣಿಗಳ ದಾಳಿಯಲ್ಲಿ ಮೃತಪಟ್ಟರೆ 15 ಲಕ್ಷ ಪರಿಹಾರ ದೊರೆಯವ ಯೋಜನೆಯ ಮಾಹಿತಿ ಈಕೆಗೆ ದೊರೆತಿದೆ. ಪತಿಯನ್ನು ಕೊಲೆಗೈಯ್ಯುವ ಸ್ಕೆಚ್ ತಯಾರಿಸಿದ ಸಲ್ಲಾಪುರಿ ಕಳೆದ ಮಂಗಳವಾರ ಪತ್ನಿಗೆ ವಿಷ ಹಾಕಿ ಕೊಂದಿದ್ದಾಳೆ. ನಂತರ ಮನೆಯಿಂದ ಮೃತದೇಹವನ್ನ ಹೊರಕ್ಕೆ ಎಳೆದೊಯ್ದು ವಿರೂಪಗೊಳಿಸಿ ಗುಂಡಿಯಲ್ಲಿ ಮುಚ್ಚಿಹಾಕಿ ಕಾಡು ಪ್ರಾಣಿ ದಾಳಿಯಿಂದ ಮೃತಪಟ್ಟಂತೆ ಬಿಂಬಿಸಿದ್ದಾಳೆ. ನಂತರ ಠಾಣೆಗೆ ಆಗಮಿಸಿ ಪತಿ ನಾಪತ್ತೆಯಾದ ಬಗ್ಗೆ ಮಿಸ್ಸಿಂಗ್ ಕಂಪ್ಲೇ0ಟ್ ಕೊಟ್ಟಿದ್ದಾಳೆ. ದೂರಿನಲ್ಲಿ ಹುಲಿ ಎಳೆದೊಯ್ದಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಸಲ್ಲಾಪುರಿ ಮಾತನ್ನ ನಂಬಿದ ಪೊಲೀಸರು ಸ್ಥಳಕ್ಕೆ ಹೋಗಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ಹುಡುಕಾಟ ನಡೆಸಿದ್ದಾರೆ. ಹುಲಿ ದಾಳಿ ನಡೆಸಿದ ಯಾವುದೇ ಕುರುಹುಗಳು ಪೊಲೀಸರಿಗೆ ಸಿಕ್ಕಿಲ್ಲ. ಮಳೆ ಸುರಿದ ಕಾರಣ ಕುರುಹುಗಳು ನಾಶವಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಆದರೆ ಸಿಸಿ ಕ್ಯಾಮರಾದಲ್ಲಿ ಕೇವಲ ಪತ್ನಿ ಸಲ್ಲಾಪುರಿ ಮಾತ್ರ ಓಡಾಡಿರುವುದು ಕಂಡು ಬಂದಿದೆ. ಇನ್ ಸ್ಪೆಕ್ಟರ್ ಮುನಿಯಪ್ಪ ರವರು ಸಲ್ಲಾಪುರಿಯನ್ನು ತಿರ್ವ ವಿಚಾರಣೆಗೆ ಒಳಪಡಿಸಿದಾಗ ವಿಷ ಕೊಟ್ಟು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ಸಿಗುವ 15 ಲಕ್ಷ ಪರಿಹಾರ ಹಣ ಪಡೆಯುವ ಹುನ್ನಾರದಿಂದ ಕೃತ್ಯ ನಡೆಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್ ಹಾಗೂ ಡಿವೈಎಸ್ಪಿ ಗೋಪಾಲ ಕೃಷ್ಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ, ರಾಧಾ, ಮಂಜು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!