ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದೆ.
ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಮತ್ತವರ ತಂಡಕ್ಕೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ ಸೇರಿಕೊಂಡು ಹಣವನ್ನು ಪಣವಾಗಿಟ್ಟು ಕೊಂಡು ಅಕ್ರಮವಾಗಿ ಕೋಳಿಗಳಿಗೆ ಹಿಂಸೆಯಾಗುವ ರೀತಿಯಲ್ಲಿ ಜೂಜಾಟವಾಡುತ್ತಿದ್ದವರನ್ನು ಪತ್ತೆಹಚ್ಚಿ ಅಪಾದಿತರನ್ನು ಮತ್ತು ಅಪಾದಿತರು ಕೋಳಿ ಅಂಕಕ್ಕೆ ಉಪಯೋಗಿಸಿದ ಒಂದು ಹುಂಜ ಕೋಳಿ ಹಾಗೂ ಜೂಜಾಟಕ್ಕೆ ಉಪಯೋಗಿಸಿದ 9,430 ರೂ. ನಗದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…