ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದೆ.
ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಮತ್ತವರ ತಂಡಕ್ಕೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ ಸೇರಿಕೊಂಡು ಹಣವನ್ನು ಪಣವಾಗಿಟ್ಟು ಕೊಂಡು ಅಕ್ರಮವಾಗಿ ಕೋಳಿಗಳಿಗೆ ಹಿಂಸೆಯಾಗುವ ರೀತಿಯಲ್ಲಿ ಜೂಜಾಟವಾಡುತ್ತಿದ್ದವರನ್ನು ಪತ್ತೆಹಚ್ಚಿ ಅಪಾದಿತರನ್ನು ಮತ್ತು ಅಪಾದಿತರು ಕೋಳಿ ಅಂಕಕ್ಕೆ ಉಪಯೋಗಿಸಿದ ಒಂದು ಹುಂಜ ಕೋಳಿ ಹಾಗೂ ಜೂಜಾಟಕ್ಕೆ ಉಪಯೋಗಿಸಿದ 9,430 ರೂ. ನಗದನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…