ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಗುಡ್ಡದ ಮಣ್ಣು ತಿಂಗಳೆರಡಾದರೂ ತೆರವಾಗಿಲ್ಲ.
ಸರ್ಕ್ಯೂಟ್ ಹೌಸ್ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು ತಿಂಗಳೇ ಕಳೆದಿದೆ, ಆದರೆ ಆ ರೋಡ್ಗೆ ಬಿದ್ದಿರುವ ಮಣ್ಣು ಮಾತ್ರ ತೆರವಾಗದೆ ಅಲ್ಲೇ ಇದೆ. ಕಳೆದ ಜುಲೈ 16ರಂದು ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ಅಡಚಣೆಯಾಗಿತ್ತು. ಈ ಮಣ್ಣು ತೆರವಾಗದೆ ಪಾದಚಾರಿ ಮಾರ್ಗ ಬಂದ್ ಆದ ಕಾರಣ, ಪಾದಚಾರಿಗಳು ರಸ್ತೆಯ ಮೇಲೆ ನಡೆಯುವ ದುಸ್ಥಿತಿ ಎದುರಾಗಿದೆ.
ಇಳಿಜಾರಾದ ಕಾರಣ ವಾಹನಗಳು ಈ ಮಾರ್ಗದಲ್ಲಿ ವೇಗವಾಗಿ ಸಾಗುತ್ತವೆ. ಆದಷ್ಟು ಬೇಗನೆ ಪಾದಚಾರಿ ಮಾರ್ಗದ ಮೇಲಿನ ಮಣ್ಣನ್ನು ತೆರವುಗೊಳಿಸಿ ಪಾದಚಾರಿಗಳ ಸುರಕ್ಷತೆಗೆ ಪಾಲಿಕೆ ಆದ್ಯತೆಯನ್ನು ನೀಡಬೇಕು. ಕೂಡಲೇ ಈ ಬಗ್ಗೆ ಅಧಿಕಾರಿಗಳು ಎಚ್ಚೆತು ಮುಂದೆ ಎದುರಾಗಬಹುದಾದ ಅಪಾಯವನ್ನು ತಡೆಯಬೇಕು ಎಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…