ಜನ ಮನದ ನಾಡಿ ಮಿಡಿತ

Advertisement

ಕಮಲಶಿಲೆ: ರಸ್ತೆಗೆ ಅಡ್ಡ ಬಂದ ಕಡವೆಗೆ ಬೈಕ್ ಡಿಕ್ಕಿ; ಸವಾರ ಮೃತ್ಯು, ಸಹಸವಾರ ಗಂಭೀರ

ಚಲಿಸುತ್ತಿದ್ದ ಬೈಕ್ ವೊಂದು ದಿಢೀರ್ ಆಗಿ ರಸ್ತೆಗೆ ಅಡ್ಡ ಬಂದು ಕಡವೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪ ತಾರೆಕುಡ್ಲುನಲ್ಲಿ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರ ನೆಲ್ಲಿಕಟ್ಟೆಯ ಶ್ರೇಯಸ್ ಮೊಗವೀರ (23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹಸವಾರ ವಿಶ್ಲೇಶ್ ಎಂದು ತಿಳಿದು ಬಂದಿದೆ. ಇವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಸ್ನೇಹಿತರು ಮಧ್ಯಾಹ್ನ ಕಮಲಶಿಲೆ ದೇವಸ್ಥಾನಕ್ಕೆ ಹೋಗಿದ್ದು ಅಲ್ಲಿಂದ ವಾಪಸು ನೆಲ್ಲಿಕಟ್ಟೆಗೆ ಬರುತ್ತಿದ್ದ ಸಂದರ್ಭ ತಾರೆಕುಡ್ಲು ಸಮೀಪ ದೊಡ್ಡ ಕಡವೆಯೊಂದು ಬೈಕ್ ಗೆ ಒಮ್ಮೆಲೇ ಅಡ್ಡ ಬಂದ ಪರಿಣಾಮ ಕಡವೆಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಶಂಕರನಾರಾಯಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!