ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: `ಭೂ ಕೈಲಾಸ ಕಾರಿಂಜ ಕ್ಷೇತ್ರದಲ್ಲಿ ತೆನೆ ಹಬ್ಬ; ಕಾರಿಂಜ ಕ್ಷೇತ್ರದಿಂದ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆ

ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕನ್ಯಾ ಸಂಕ್ರಮಣದ ಮರುದಿನ ಸಿಂಗುಡೆಯ ದಿನ ಪೂರ್ವ ಸಂಪ್ರದಾಯದಂತೆ ಭೂ ಕೈಲಾಸ ಕ್ಷೇತ್ರ ಕಾರಿಂಜ ಕ್ಷೇತ್ರದಿಂದ ಶ್ರೀ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ಕೊನೆಗೆ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕೊಂಡೊಯ್ಯಲಾಗಿದೆ.

ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂಬ ನಂಬಿಕೆ ಇದ್ದು, ಇಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ.

ಜತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!