ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕನ್ಯಾ ಸಂಕ್ರಮಣದ ಮರುದಿನ ಸಿಂಗುಡೆಯ ದಿನ ಪೂರ್ವ ಸಂಪ್ರದಾಯದಂತೆ ಭೂ ಕೈಲಾಸ ಕ್ಷೇತ್ರ ಕಾರಿಂಜ ಕ್ಷೇತ್ರದಿಂದ ಶ್ರೀ ದೇವರು ವಿವಿಧ ಕಟ್ಟೆಗಳಿಗೆ ಆಗಮಿಸಿ ಪೂಜೆಯನ್ನು ಪಡೆದು ಕೊನೆಗೆ ಸರಪಾಡಿ ಗ್ರಾಮದ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕೊಂಡೊಯ್ಯಲಾಗಿದೆ.
ಜೈನ ಮನೆತನದ ಲೀಲಾವತಿ ಅಮ್ಮನವರಿಗೆ ಸೇರಿದ ಕಂಬಳದ ಗದ್ದೆಯಲ್ಲಿ ಬಂಗಾರದ ತೆನೆ ಬೆಳೆದಿದೆ ಎಂಬ ನಂಬಿಕೆ ಇದ್ದು, ಇಲ್ಲಿಂದ ತೆನೆಗಳನ್ನು ಪಡೆದು ಕಾರಿಂಜದಲ್ಲಿ ಸಂಪ್ರದಾಯಗಳು ನೆರವೇರಿದ ಬಳಿಕ ಭಕ್ತರಿಗೆ ಹಂಚಲಾಗುತ್ತದೆ.
ಜತೆಗೆ ಪ್ರತಿ ಕಟ್ಟೆಗಳು ಸಹಿತ ಹಲ್ಲಂಗಾರು ಕಟ್ಟೆಯಲ್ಲೂ ಹೆಚ್ಚಿನ ಭಕ್ತರು ಸೇರಿ ತೆನೆಗಳನ್ನು ಪಡೆದು ಮನೆ ತುಂಬಿಸಿಕೊಂಡು ಹೊಸ ಅಕ್ಕಿ ಊಟ ಮಾಡುವ ಕಾರ್ಯ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…