ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.
ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್.ಎನ್ (19) ವರ್ಷ. ಈಕೆ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಪ್ರಸ್ತುತ ಈಕೆ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಳು. ಮೈಸೂರಿನ ಪಿ.ಜಿ. ಯಿಂದ ಕಾಲೇಜಿಗೆ ಹೋಗುವ ಬದಲು ಹುಣಸೂರಿಗೆ ಬಂದು ತೂಗು ಸೇತುವೆ ಮೇಲೆ ಬ್ಯಾಗ್ ಇಟ್ಟು ನದಿಗೆ ಹಾರಿದ್ದಾಳೆ. ತಾಲೂಕಿನ ಕುಪ್ಪೆಕೊಳ್ಳಗಟ್ಟ ಗ್ರಾಮದ ಶರತ್ ಎಂಬಾತನನ್ನು ಮೃತ ದೀಪಿಕಾ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಶರತ್ ಹಾಗೂ ದೀಪಿಕಾ ಮೊಬೈಲ್ಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ಲವ್ ಬ್ರೇಕಪ್ಗೆ ಮನನೊಂದು ನಗರದ ತೂಗು ಸೇತುವೆ ಬಳಿ ತೆರಳಿ ಸೇತವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರುವ ಮುನ್ನ ಡೆತ್ನೋಟ್ ನಲ್ಲಿ ಮೃತ ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…