ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.
ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್.ಎನ್ (19) ವರ್ಷ. ಈಕೆ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಪ್ರಸ್ತುತ ಈಕೆ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಳು. ಮೈಸೂರಿನ ಪಿ.ಜಿ. ಯಿಂದ ಕಾಲೇಜಿಗೆ ಹೋಗುವ ಬದಲು ಹುಣಸೂರಿಗೆ ಬಂದು ತೂಗು ಸೇತುವೆ ಮೇಲೆ ಬ್ಯಾಗ್ ಇಟ್ಟು ನದಿಗೆ ಹಾರಿದ್ದಾಳೆ. ತಾಲೂಕಿನ ಕುಪ್ಪೆಕೊಳ್ಳಗಟ್ಟ ಗ್ರಾಮದ ಶರತ್ ಎಂಬಾತನನ್ನು ಮೃತ ದೀಪಿಕಾ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಶರತ್ ಹಾಗೂ ದೀಪಿಕಾ ಮೊಬೈಲ್ಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ಲವ್ ಬ್ರೇಕಪ್ಗೆ ಮನನೊಂದು ನಗರದ ತೂಗು ಸೇತುವೆ ಬಳಿ ತೆರಳಿ ಸೇತವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರುವ ಮುನ್ನ ಡೆತ್ನೋಟ್ ನಲ್ಲಿ ಮೃತ ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…