ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪ್ರೇಮ ವೈಫಲ್ಯದಿಂದ ಮನನೊಂದು ಲಕ್ಷ್ಮಣ ತೀರ್ಥ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ತೂಗುಸೇತುವೆ ಬಳಿ ಗುರುವಾರ ನಡೆದಿದೆ.
ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ನಂಜುಂಡಸ್ವಾಮಿ ಮತ್ತು ಅಂಬುಜ ದಂಪತಿ ಪುತ್ರಿ ದೀಪಿಕಾ.ಎಚ್.ಎನ್ (19) ವರ್ಷ. ಈಕೆ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವತಿ ಪ್ರಸ್ತುತ ಈಕೆ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಳು. ಮೈಸೂರಿನ ಪಿ.ಜಿ. ಯಿಂದ ಕಾಲೇಜಿಗೆ ಹೋಗುವ ಬದಲು ಹುಣಸೂರಿಗೆ ಬಂದು ತೂಗು ಸೇತುವೆ ಮೇಲೆ ಬ್ಯಾಗ್ ಇಟ್ಟು ನದಿಗೆ ಹಾರಿದ್ದಾಳೆ. ತಾಲೂಕಿನ ಕುಪ್ಪೆಕೊಳ್ಳಗಟ್ಟ ಗ್ರಾಮದ ಶರತ್ ಎಂಬಾತನನ್ನು ಮೃತ ದೀಪಿಕಾ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಶರತ್ ಹಾಗೂ ದೀಪಿಕಾ ಮೊಬೈಲ್ಗೆ ಕರೆ ಮಾಡಿ ಮಾತನಾಡಿದ್ದಾರೆ. ನಂತರ ಲವ್ ಬ್ರೇಕಪ್ಗೆ ಮನನೊಂದು ನಗರದ ತೂಗು ಸೇತುವೆ ಬಳಿ ತೆರಳಿ ಸೇತವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಿಗೆ ಹಾರುವ ಮುನ್ನ ಡೆತ್ನೋಟ್ ನಲ್ಲಿ ಮೃತ ದೀಪಿಕಾ ತನ್ನ ಸಾವಿಗೆ ನಾನೇ ಕಾರಣ, ತನ್ನ ತಂದೆ-ತಾಯಿಯ ಮನಸ್ಸು ನೋಯಿಸಿರುವ ಕಾರಣ ನೀಡಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ತಂದೆ ನಂಜುಂಡಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…