ದಕ್ಷಿಣ ಕನ್ನಡ :ಆರು ದಶಕಗಳಿಂದ ಪೌರೋಹಿತ್ಯ ವೃತ್ತಿ ಮಾಡಿಕೊಂಡು, ನೂರಾರು ಪುರೋಹಿತರನ್ನು ಬೆಳೆಸಿ ಸಮಾಜಕ್ಕೆ ಕೊಡುಗೆ ನೀಡಿದ, ಜನಾನುರಾಗಿ, ಮಿತಭಾಷಿ, ವೈದಿಕ ವಿದ್ವಾಂಸರು, ವೇದವಿಧಿ ಪಾರಂಗತ ವೇದ ವಿದ್ವಾನ್ ಬೇಂಗ್ರೋಡಿ ಮಾಧವ ಭಟ್ಟರು ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ವಯೋ ಸಹಜ ಕಾಯಿಯಿಂದ ಬಳಲುತ್ತಿದ್ದ ಭಟ್ಟರು ಅನಾರೋಗ್ಯದ ದಿನಗಳಲ್ಲೂ ಸದಾಕಾಲ ಸೇವೆಗೆ ತನ್ನನ್ನು ಮುಡಿಪಾಗಿಟ್ಟ ಮಾಧಪ್ಪಣ್ಣನವರು ಇನ್ನು ನೆನಪು ಮಾತ್ರ. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು. ಪತ್ನಿ,ಮೂವರು ಗಂಡು ಮಕ್ಕಳು, ಐದು ಜನ ಹೆಣ್ಣು ಮಕ್ಕಳು, ಅಪಾರ ಶಿಷ್ಯವರ್ಗ, ಅನೇಕ ಬಂಧು ಬಾಂಧವರು ಮತ್ತು ಹಿತೈಷಿಗಳನ್ನು ಹೊಂದಿರುವ ಭಟ್ಟರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ ಮತ್ತು ಈ ಅಗಲುವಿಕೆ ವೈದಿಕ ವಿಭಾಗದಲ್ಲಿ ಒಂದು ದೊಡ್ಡ ನಿರ್ವಾತ ಸೃಷ್ಟಿಸಿದೆ… ಎನ್ನುವುದು ಸಮುದಾಯದ ಅಭಿಪ್ರಾಯವಾಗಿದೆ ಸರ್ವಮಾನ್ಯ, ಸಜ್ಜನ, ಮೇಧಾವಿ, ಸರಳ, ಅತಿ ವಿರಳ ಸಾಕಾರಮೂರ್ತಿಯನ್ನು ಕಳೆದುಕೊಂಡಿದ್ದೇವೆ. ಮೃತರ ಆತ್ಮಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಮತ್ತು ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ಮಕ್ಕಳು, ಪರಿವಾರ, ಬಂಧು-ಬಳಗ, ಅಪಾರ ಶಿಷ್ಯ ವೃಂದ ಮತ್ತು ಹಿತೈಷಿಗಳಿಗೆ ನೀಡಲಿ ಎನ್ನುವುದು ಸಮಾಜದ ಈ ಕ್ಷಣದ ಪ್ರಾರ್ಥನೆ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್ನಲ್ಲಿರುವ…