ದಕ್ಷಿಣ ಕನ್ನಡ :ಆರು ದಶಕಗಳಿಂದ ಪೌರೋಹಿತ್ಯ ವೃತ್ತಿ ಮಾಡಿಕೊಂಡು, ನೂರಾರು ಪುರೋಹಿತರನ್ನು ಬೆಳೆಸಿ ಸಮಾಜಕ್ಕೆ ಕೊಡುಗೆ ನೀಡಿದ, ಜನಾನುರಾಗಿ, ಮಿತಭಾಷಿ, ವೈದಿಕ ವಿದ್ವಾಂಸರು, ವೇದವಿಧಿ ಪಾರಂಗತ ವೇದ ವಿದ್ವಾನ್ ಬೇಂಗ್ರೋಡಿ ಮಾಧವ ಭಟ್ಟರು ವಿಧಿವಶರಾಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ವಯೋ ಸಹಜ ಕಾಯಿಯಿಂದ ಬಳಲುತ್ತಿದ್ದ ಭಟ್ಟರು ಅನಾರೋಗ್ಯದ ದಿನಗಳಲ್ಲೂ ಸದಾಕಾಲ ಸೇವೆಗೆ ತನ್ನನ್ನು ಮುಡಿಪಾಗಿಟ್ಟ ಮಾಧಪ್ಪಣ್ಣನವರು ಇನ್ನು ನೆನಪು ಮಾತ್ರ. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು. ಪತ್ನಿ,ಮೂವರು ಗಂಡು ಮಕ್ಕಳು, ಐದು ಜನ ಹೆಣ್ಣು ಮಕ್ಕಳು, ಅಪಾರ ಶಿಷ್ಯವರ್ಗ, ಅನೇಕ ಬಂಧು ಬಾಂಧವರು ಮತ್ತು ಹಿತೈಷಿಗಳನ್ನು ಹೊಂದಿರುವ ಭಟ್ಟರ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ ಮತ್ತು ಈ ಅಗಲುವಿಕೆ ವೈದಿಕ ವಿಭಾಗದಲ್ಲಿ ಒಂದು ದೊಡ್ಡ ನಿರ್ವಾತ ಸೃಷ್ಟಿಸಿದೆ… ಎನ್ನುವುದು ಸಮುದಾಯದ ಅಭಿಪ್ರಾಯವಾಗಿದೆ ಸರ್ವಮಾನ್ಯ, ಸಜ್ಜನ, ಮೇಧಾವಿ, ಸರಳ, ಅತಿ ವಿರಳ ಸಾಕಾರಮೂರ್ತಿಯನ್ನು ಕಳೆದುಕೊಂಡಿದ್ದೇವೆ. ಮೃತರ ಆತ್ಮಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಮತ್ತು ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿ ಮಕ್ಕಳು, ಪರಿವಾರ, ಬಂಧು-ಬಳಗ, ಅಪಾರ ಶಿಷ್ಯ ವೃಂದ ಮತ್ತು ಹಿತೈಷಿಗಳಿಗೆ ನೀಡಲಿ ಎನ್ನುವುದು ಸಮಾಜದ ಈ ಕ್ಷಣದ ಪ್ರಾರ್ಥನೆ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…