ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಕೊ*ಲೆ ಮಾಡಿದ ಕ್ರೂರಿ ತಾಯಿ…!

ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.

17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಳು ಅದಕ್ಕೆ ತಾಯಿ ಗುಲ್ಝಾರ್ ಬಾನು ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ. ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದಾರೆ. ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಝಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!