ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.
17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಳು ಅದಕ್ಕೆ ತಾಯಿ ಗುಲ್ಝಾರ್ ಬಾನು ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್ಳನ್ನು ಹತ್ಯೆ ಮಾಡಲಾಗಿದೆ. ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದಾರೆ. ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಝಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…