ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.
17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಳು ಅದಕ್ಕೆ ತಾಯಿ ಗುಲ್ಝಾರ್ ಬಾನು ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್ಳನ್ನು ಹತ್ಯೆ ಮಾಡಲಾಗಿದೆ. ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದಾರೆ. ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಝಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…