ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡಿದ್ದರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಣಿಕ್, ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ ಬಗ್ಗೆ ನಾವು ಚಿಂತಿಸಿ ಆ ಕೆಲಸದಲ್ಲಿ ತೊಡಗಿಸಿ ಕೊಂಡಾಗ ಮಾತ್ರ ನಿರಾಯಾಸವಾಗಿ ಆನಂದ ನಮಗೆ ಸಿಗಬಲ್ಲದು ಎಂದ್ರು. ಇನ್ನು ಈ ಸಂದರ್ಭದಲ್ಲಿ ಸರಿಗಮ ಭಾರತಿಯ ಉದಯ ಶಂಕರ್, ಶ್ರೀಮತಿ ಶಕುಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…